Connect with us

Hi, what are you looking for?

Diksoochi News

Uncategorized

ಪಂಚಭೂತಗಳಲ್ಲಿ ಲೀನರಾದ ಹಿರಿಯ ಲೇಖಕ ಭಾಸ್ಕರ್ ಮಯ್ಯ

0

ಉಡುಪಿ : ಖ್ಯಾತ ವೈಚಾರಿಕ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಸಾಲಿಗ್ರಾಮ ಗುಂಡ್ಮಿಯ ಭಾಸ್ಕರ್ ಮಯ್ಯ ಹೃದಯಾಘಾತದಿಂದ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕು ತಗುಲಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರನ್ನು ಉಡುಪಿಯಲ್ಲಿಯೇ ಕೋವಿಡ್ ನಿಯಮದ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಯಿತು.

ವೈಚಾರಿಕ ಸಾಹಿತ್ಯಕ್ಕೆ ಅಪಾರ ಕೊಡುಗೆ
ವಿವಿಧ ವಿಶ್ವವಿದ್ಯಾಲಯಗಳಲ್ಲಿ ಎಂ.ಎ ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪಡೆದಿದ್ದರು.
ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದ ಡಾ.ಜಿ.ಭಾಸ್ಕರ್ ಮಯ್ಯ 50ಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ. ನೂರಾರು ಸಂಶೋಧನಾ ಲೇಖನಗಳನ್ನೂ ಬರೆದಿದ್ದಾರೆ. 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಕುಂದಾಪುರ ಭಂಡಾರ್‍ಕರ್ಸ್ ಕಾಲೇಜಿನಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!