ಉಡುಪಿ : ತೌಕ್ತೆ ಚಂಡಮಾರುತದಿಂದಾಗಿ ಉಭಯ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದ ಅಬ್ಬರ ಜೋರಾಗಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಾಪು, ಮರವಂತೆ, ಮಲ್ಪೆ ಕಡಲು ಪ್ರಕ್ಷುಬ್ಧಗೊಂಡಿವೆ. ಕಡಲಾರ್ಭಟ ಹೆಚ್ಚಾಗಿತ್ತು. ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ದೈತ್ಯ ಅಲೆಗಳು ಅಪ್ಪಳಿಸುತ್ತಿರುವುದರಿಂದ ಕಡಲ್ಕೊರೆತವೂ ಹೆಚ್ಚಾಗಿದೆ.
ಮಂಗಳೂರಿನಲ್ಲೂ ಅಲೆಗಳ ಅಬ್ಬರ
ಮಂಗಳೂರಿನಲ್ಲೂ ಗಾಳಿ ಸಹಿತ ಮಳೆಯಾಗುತ್ತಿದೆ. ಸೋಮೇಶ್ವರ, ಉಳ್ಳಾಲ, ಪಣಂಬೂರು, ಸುರತ್ಕಲ್ ನಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಕಡಲ್ಕೋರೆತ ತೀವ್ರವಾಗಿದೆ.
ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಕರಾವಳಿಗರಲ್ಲಿ ಆತಂಕ ಮನೆ ಮಾಡಿದೆ.
Advertisement. Scroll to continue reading.
In this article:Arabian sea, Diksoochi news, diksoochi Tv, diksoochi udupi, rain in karavali
Click to comment