ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ತೌಕ್ತೆ ಚಂಡಮಾರುತದ ರಕ್ಕಸ ಅಲೆಗಳ ಅಬ್ಬರಕ್ಕೆ ತತ್ತರಿಸಿ ಅಪಾರ ಆಸ್ತಿ ಪಾಸ್ತಿ ಹಾನಿಗೊಳಗಾದ ಪ್ರದೇಶಗಳಾದ ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ, ಅಳಿವೆಕೊಡಿ, ಗಂಗೊಳ್ಳಿ ಕಂಚಗೋಡು, ಉಪ್ಪುಂದದ ಮಡಿಕಲ್ ಮೊದಲಾದೆಡೆ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದರು.
ಬಳಿಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ದುರಸ್ಥಿ ಕಾರ್ಯಗಳನ್ನು ತುರ್ತಾಗಿ ಆರಂಭಿಸುವಂತೆ ಆಗ್ರಹಿಸಿದರು.
Advertisement. Scroll to continue reading.