ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ ನೀಡಿದರು.ಕಂಡ್ಲೂರು, ಶಂಕರ ನಾರಾಯಣ, ಸಿದ್ಧಾಪುರ, ಹಳ್ಳಿ ಹೊಳೆ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣದ ಕ್ರಮಗಳ ಬಗ್ಗೆ ತಾಲ್ಲೂಕು ವೈದ್ಯರಾದ ನಾಗಭೂಷಣ್ ಉಡುಪ ಹಾಗೂ ಆಯಾ ವೈದ್ಯರ ಜೊತೆಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕಾವ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಪುತ್ರನ್, ಸದಸ್ಯ ಸಂತೋಷ್ ಶೆಟ್ಟಿ, ಶಂಕರನಾರಾಯಣ ಗ್ರಾ.ಪಂ.ಮಾಜಿ ಅಧ್ಯಕ್ಷ ಸದಾಶಿವ್ ಶೆಟ್ಟಿ, ಸದಸ್ಯ ಗುರುದತ್ ಶೆಟ್ಟಿ, ರಾಮಚಂದ್ರ ದೇವಾಡಿಗ, ಸಿದ್ದಾಪುರ ತಾ.ಪಂ.ಮಾಜಿ ಅಧ್ಯಕ್ಷರಾದ ವಾಸುದೇವ ಪೈ, ಗ್ರಾ.ಪಂ. ಸದಸ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಹಳ್ಳಿ ಹೊಳೆ ಗ್ರಾ.ಪಂ. ಸದಸ್ಯ ಪ್ರಭಾಕರ್ ನಾಯ್ಕ್ ಉಪಸ್ಥಿತರಿದ್ದರು.
Advertisement. Scroll to continue reading.
In this article:diksoochi Kundapura, Diksoochi news, diksoochi udupi, K.Gopal Poojary
Click to comment