ಬೆಂಗಳೂರು : ಗ್ರಾಮೀಣ ಪ್ರದೇಶಗಳಿಗೆ ಕೊರೋನಾ ಸೋಂಕು ಹೆಚ್ಚುತ್ತಿದೆ. ಹಾಗಾಗಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳ ಬೇಕಾಗಿದೆ. ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಇಂದು ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೋ ಕಾನ್ಸರೆನ್ಸ್ ಸಭೆ ನಡೆಸಿ ಬಳಿಕ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲಾಗುವುದು. ಹೋಮ್ ಐಸೋಲೇಷನ್ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು. ಹೋಂ ಐಸೋಲೇಷನ್ ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ನೀಡಬೇಕು. ಇಲ್ಲವಾದಲ್ಲಿ ಸ್ಥಳೀಯವಾಗಿ ಖರೀದಿಸಿ ವಿತರಿಸಬೇಕು. ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆ ನೀಗಿಸಬೇಕು. ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳ ಸಂಪರ್ಕದಲ್ಲಿರಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ ಎಂದರು.
ಮುಂದುವರಿಯುತ್ತಾ ಲಾಕ್ ಡೌನ್?
ಇನ್ನು ಲಾಕ್ ಡೌನ್ ಮುಂದುವರೆಸಲಾಗುತ್ತಾ ಎಂಬ ಪ್ರಶ್ನೆಗೆ ಸಿಎಂ, ಈ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಚರ್ಚೆ ನಡೆಯುತ್ತಿದೆ. 2-3 ದಿನಗಳಲ್ಲಿ ತಿಳಿಸಲಾಗುವುದು ಎಂದರು. ಹಾಗೆಯೇ ಆರ್ಥಿಕ ಪ್ಯಾಕೇಜ್ ಘೋಷಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.