Connect with us

Hi, what are you looking for?

Diksoochi News

Uncategorized

ಉಡುಪಿ : ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರ ತಡೆಯುವವರ ವಿರುದ್ದ ಕಾನೂನು ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

0

 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ ಜಿಲ್ಲೆಯಲ್ಲಿ ಈವರೆಗೆ ಕಂಡುಬAದಿರುವ ಎಲ್ಲಾ ಪ್ರಕರಣಗಳಲ್ಲಿ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಕಂಡುಬAದಿರುವುದಿಲ್ಲ. ಅಲ್ಲದೇ ಅಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳು ಸೀಮಿತ ಸಂಖ್ಯೆಯಲ್ಲಿರುವುದರಿAದ ರೋಗಲಕ್ಷಣ ತೀವ್ರವಿರುವ ಮತ್ತು ಆಸ್ಪತ್ರೆಯ ಆರೈಕೆಯ ಅಗತ್ಯವಿರುವ ರೋಗಿಗಳಿಗೆ ಲಭ್ಯವಾಗುವ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ.

 ಸರಕಾರವು ಕೋವಿಡ್ -19 ಪಾಸಿಟಿವ್ ರೋಗಿಗಳನ್ನು ಪರೀಕ್ಷಿಸಲು, ವೈದ್ಯಕೀಯ ನೆರವಿನ ಅಗತ್ಯತೆಯನ್ನು ಪರಿಶೀಲಿಸಿ, ಅಸ್ಪತ್ರೆಗೆ ದಾಖಲಿಸುವುದು ಅವಶ್ಯಕವೆಂದಿನಿಸಿದಲ್ಲಿ ಮಾತ್ರವೇ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳ ಅಧಾರದ ಮೇಲೆ, ಆಸ್ಪತ್ರೆಗಳಲ್ಲಿ ದಾಖಲಿಸುವಂತೆ ಹಾಗೂ ಉಳಿದ ಪ್ರಕರಣಗಳಲ್ಲಿ ರೋಗಿಯ ಮನೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಆಧಾರದ ಮೇಲೆ ಹೋಮ್ ಐಸೋಲೆಶನ್ (ಮನೆ ಪ್ರತ್ಯೇಕತೆ) ಅಥವಾ ಸಾಂಸ್ಥಿಕ ಪ್ರತ್ಯೇಕತೆಯನ್ನು ನೀಡುವುದು ಸೂಕ್ತವೆಂದು ಸೂಚಿಸಿದೆ.

 ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಉಡುಪಿಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುತ್ತಿದ್ದು, ಈ ಮಧ್ಯೆ ಮನೆಯಲ್ಲಿ ಅಗತ್ಯವಾದ ಸೌಲಭ್ಯಗಳಿಲ್ಲದಿದ್ದರೂ ಇನ್ಸಿಟ್ಯೂಷನಲ್ ಐಸೋಲೇಶನ್ (ಸಾಂಸ್ಥಿಕ ಪ್ರತ್ಯೇಕತೆ) ಮಾಡಿಸಿಕೊಳ್ಳಲು ನಿರಾಕರಿಸುತ್ತಿರುವ ಬಗ್ಗೆ , ರೋಗಿಗಳಿಂದ ಪ್ರತಿರೋಧವ ಎದುರಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.

Advertisement. Scroll to continue reading.

 ರೋಗಿಗಳು ಸಾಂಸ್ಥಿಕ ಪ್ರತ್ಯೇಕತೆಗೆ ಪ್ರತಿರೋಧವನ್ನು ವ್ಯಕ್ತಪಡಿಸುವುದರಿಂದ ರೋಗಿಯ ಮನೆಮಂದಿಗೆಲ್ಲ ರೋಗ ತಗಲುವ ಸಂಭವ ಅಧಿಕವಾಗಿದ್ದು, ಕೋವಿಡ್-19 ಪಾಸಿಟಿವ್ ಪ್ರಕರಣಗಳು ಅಲ್ಪ ಸಮಯದಲ್ಲಿ ಹೆಚ್ಚಾಗಿ , ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಸಂಖ್ಯೆ ಹಾಗೂ ಆಸ್ಪತ್ರೆಗಳ ಬೆಡ್ ಗಳಿಗೆ ಬೇಡಿಕೆ ಹೆಚ್ಚಾಗಿ, ಬೆಡ್ ಗಳ ಕೊರತೆ ಉಂಟಾಗಬಹುದಾಗಿರುವುದರಿAದ, ಈ ವಿಚಾರವನ್ನು ಈಗ ಗಂಭೀರವಾಗಿ ಪರಿಗಣಿಸಿದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಕಾರ್ಯಚರಣೆಗೆ ಅಡಚಣೆಯುಂಟಾಗಬಹುದಾಗಿದೆ. ಅಲ್ಲದೇ ಅಸ್ಪತ್ರೆಗಳಲ್ಲಿ ಬೆಡ್ ಗಳನ್ನು ಆಶ್ರಯಿಸಿ ಬರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ, ಈಗಾಗಲೇ ಸೀಮಿತ ಸಂಖ್ಯೆಯಲ್ಲಿರುವ ಆಸ್ಪತ್ರೆ ಬೆಡ್ ಗಳ ಪೂರ್ಣಗೊಂಡು, ಬೆಡ್ ಗಳು ಸರಿಯಾದ ಸಮಯದಲ್ಲಿ ಲಭ್ಯವಾಗದೇ ಸಾವಿನ ಪ್ರಮಾಣ ಹೆಚ್ಚಾಗಬಹುದಾಗಿದೆ.

 ಆದ್ದರಿಂದ ಆರೋಗ್ಯ ಪ್ರಾಧಿಕಾರಗಳು /ವಾರ್ಡ್ ಕಾರ್ಯಪಡೆ / ಗ್ರಾಮ ಕಾರ್ಯಪಡೆಯ ಅಭಿಪ್ರಾಯದಂತ ಮನೆಯ ಪ್ರತ್ಯೇಕತೆಗೆ ಅಗತ್ಯವಾದ ಸೌಲಭ್ಯಗಳನ್ನು ಮನೆಗಳಲ್ಲಿ ಹೊಂದಿರದ ಅಔಗಿIಆ-19 ರೋಗಿಗಳು ಸಾಂಸ್ಥಿಕ ಪ್ರತ್ಯೇಕತೆಗೆ (ಕೋವಿಡ್ ಕೇರ್ ಸೆಂಟರ್ ) ಕಡ್ಡಾಯವಾಗಿ ಸ್ಥಳಾಂತರಗೊಳ್ಳಬೇಕು.

 ಆದರೆ ಅಂತಹ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005, ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ 2020 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!