ಆಂಧ್ರಪ್ರದೇಶ : ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನ ತೈಲ ಸಂಸ್ಕರಣ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಸಾರ್ವಜನಿಕರಿಗೂ ತೊಂದರೆಯಾಗಿಲ್ಲ ಎಂದು ಕಂಪೆನಿಯು ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದೆ. ಹೆಚ್ ಪಿ ಸಿ ಎಲ್ ನ ಮೂರನೇ ಘಟಕದ ಫ್ಲಾಂಟ್ ನಲ್ಲಿ ಅವಘಡ ಸಂಭವಿಸಿದ್ದು, 5 ಅಗ್ನಿಶಾಮಕದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ. ಮತ್ತಷ್ಟು ಅಗ್ನಿಶಾಮಕ ವಾಹನಗಳು ಸ್ಥಳಿಕ್ಕೆ ಆಗಮಿಸಿಸುತ್ತಿವೆ ಎಂದು ವಿಭಾಗೀಯ ಪೊಲೀಸ್ ಆಯುಕ್ತೆ ಐಶ್ವರ್ಯಾ ರಸ್ತೋಗಿ ಕಾರ್ಯಾಚರಣೆ ವೇಳೆ ತಿಳಿಸಿದ್ದರು. ಕಂಪನಿಯು ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದೆ.