Connect with us

Hi, what are you looking for?

Diksoochi News

Uncategorized

ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ.ನಾಗಭೂಷಣ ಉಡುಪ ನೇಮಕ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ತಾಲ್ಲೂಕು ಆರೋಗ್ಯಾಧಿಕಾರಿಯಾಗಿರುವ ಡಾ.ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ.ಸುಧೀರಚಂದ್ರ ಸೂಡ ಅವರು ಮೇ.31 ರಂದು ಸೇವಾ ನಿವೃತ್ತಿ ಹೊಂದಲಿದ್ದು, ಅವರ ಸ್ಥಾನಕ್ಕೆ ಡಾ.ಉಡುಪ ಅವರನ್ನು ನೇಮಕ ಮಾಡಲಾಗಿದೆ. ಮೂಲತ: ಕುಂದಾಪುರ ತಾಲ್ಲೂಕಿನವರಾದ ಡಾ.ನಾಗಭೂಷಣ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು, ಬಳಿಕ ಉಡುಪಿಯಲ್ಲಿ ರಾಷ್ಟ್ರೀಯ ಆರೋಗ್ಯ ಮೆಷನ್ ವಿಭಾಗದ ವೈದ್ಯಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಕಳೆದ ಕೆಲವು ವರ್ಷಗಳಿಂದ ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎರಡು ಬಾರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗೆ ಪ್ರಭಾರ ಅಧಿಕಾರ ನಿರ್ವಹಣೆಯನ್ನು ಅವರು ಉತ್ತಮ ರೀತಿಯಲ್ಲಿ ಮಾಡಿದ್ದರು. ಕೊರಗರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕೊರಗ ಸಮುದಾಯದ ಆರೋಗ್ಯ ಸಲಹಾ ವೈದ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ಸಹಾಯಕ ಗವರ್ನರ್ ಆಗಿಯೂ ಕರ್ತವ್ಯ ಸಲ್ಲಿಸಿದ್ದಾರೆ.

Advertisement. Scroll to continue reading.

ಶ್ರಮ ಜೀವಿ, ಜನ ಮೆಚ್ಚಿದ ಅಧಿಕಾರಿ

ಸೇವಾ ಕ್ಷೇತ್ರದಲ್ಲಿ ಉತ್ತಮ ಸಾರ್ವಜನಿಕ ಸಂಪರ್ಕ ಹೊಂದಿರುವ ಅಧಿಕಾರಿಯಾಗಿರುವ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲೆಯ ಮಲೆನಾಡು ಹಾಗೂ ಗ್ರಾಮೀಣ ಭಾಗಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದು ಜನಮನ್ನಣೆ ಪಡೆದಿದ್ದಾರೆ. ಕೋವಿಡ್ 19 ನಿಯಂತ್ರಣಕ್ಕಾಗಿ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನಲ್ಲಿ ಸೋಂಕು ಹಬ್ಬುವುದನ್ನು ಕಡಿಮೆ ಮಾಡಲು ಹಲವಾರು ಯೋಜನೆಗಳನ್ನು ಪರಿಚಯಿಸಿ ಅವರು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಕೋವಿಡ್ ಗಂಟಲು ಪರೀಕ್ಷೆಗಾಗಿ ರಾಜ್ಯದಲ್ಲಿ ಮೊದಲ ಬಾರಿ ಸಂಚಾರಿ ಘಟಕವನ್ನು ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಸೋಂಕಿತರ ಸಂಖ್ಯೆ ಹೆಚ್ಚಾದಾಗ ಆರೈಕೆ ಕೇಂದ್ರಗಳ ಸ್ಥಾಪನೆಯ ಪ್ರಾಸ್ತಾವನೆಗಳು ಬಂದಾಗಲೂ, ರೆಡ್‍ಕ್ರಾಸ್, ರೋಟರಿ, ಲಯನ್ಸ್ ಹಾಗೂ ಇತರ ದಾನಿಗಳ ನೆರವನ್ನು ಕ್ರೋಢಿಕರಿಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾಗಭೂಷಣ ಅವರ ಶ್ರಮ ಗಮನಾರ್ಹ. ಸರ್ಕಾಋಇ ಕರ್ತವ್ಯದ ಜೊತೆಗೆ ಕೃಷಿಕರಾಗಿಯೂ ಉಡುಪ ಶ್ರಮಿಸುತ್ತಾರೆ. ತಮ್ಮ ಕೃಷಿ ತೋಟದಲ್ಲಿ ಬೆವರ ಹರಿಸುತ್ತಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!