ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದಲ್ಲಿ ಶುಕ್ರವಾರ ನಡೆದಿದೆ. ಜಿರಂಜೀವಿ(34) ಆತ್ಮಹತ್ಯೆ ಮಾಡಿಕೊಂಡವರು. ಚಿರಂಜೀವಿ ಕೋಟೇಶ್ವರದ ಖಾಸಗಿ ಪ್ಲಾಸ್ಟಿಕ್ ಇಂಡಸ್ಟ್ರಿ ಒಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡಿಕೊಂಡಿದ್ದು, ಅಲ್ಲಿನ ವಸತಿ ಗೃಹದಲ್ಲಿ ವಾಸವಾಗಿದ್ದರು. ಶುಕ್ರವಾರ ಕೆಲಸಕ್ಕೆ ಹೋಗದ ಕಾರಣ ರೂಮಿಗೆ ಹೋಗಿ ನೋಡಿದಾಗ ಚಿರಂಜೀವಿ ರೂಮಿನ ಫ್ಯಾನ್ ಗೆ ಬೆಡ್ ಶೀಟ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.