Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಗ್ರಾ.ಪಂ.ಗಳಿಗೆ ಉಚಿತ ಕಾರ್ಕಳ ಬಿಳಿಬೆಂಡೆ ಬೀಜ ವಿತರಣೆ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಾರ್ಕಳ ಬಿಳಿ ಬೆಂಡೆ ಯನ್ನು ಎಲ್ಲರ ಮನೆಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಮಂಗಳವಾರ ಹೆಬ್ರಿಯ ಅನಂತಪದ್ಮನಾಭ ಸನ್ನಿಧಿಯಲ್ಲಿ ಬಿಳಿ ಬೆಂಡೆಯ ಬೀಜವನ್ನು ಉಚಿತವಾಗಿ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ನೀಡಲಾಯಿತು.


ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಕನಿಷ್ಠ 50 ಮನೆಗಳಲ್ಲಿ ಬಿಳಿ ಬೆಂಡೆಯ ಸಂಕಲ್ಪದೊಂದಿಗೆ ಕೆಲಸ ಮಾಡಿ, ಬೆಂಡೆಗೊಂದು ರಾಜ್ಯಾದ್ಯಂತ ಮನ್ನಣೆಯನ್ನು ತಂದು ಕೊಡಬೇಕಾಗಿದೆ ಎಂದು ಹೇಳಿದರು.
ಈಗಾಗಲೇ ಕಾರ್ಲ ಕಜೆ ಬ್ರಾಂಡ್ ಆಗಿ ಪ್ರಸಿದ್ಧಿಪಡೆದಿದೆ. ಬಿಳಿ ಬೆಂಡೆಯನ್ನು ಪ್ರತಿಯೊಂದು ಮನೆಯಲ್ಲೂ ಕೂಡ ಬೆಳೆಯಲು ಅವಕಾಶವಿದ್ದು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಂತೆ ಹಿತವಾಗಿ ಬೀಜಗಳನ್ನು ನೀಡಲಾಗುವುದು. ಈ ಮೂಲಕ ಕೃಷಿ ಮತ್ತು ರೈತರನ್ನು ಪ್ರೋತ್ಸಾಹಿಸುವ ಕೆಲಸ ಕಾರ್ಯಗಳು ನಡೆಯಬೇಕಾಗಿದೆ ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಣಿರಾಜ್ ಶೆಟ್ಟಿ, ಮಹಾವೀರ ಹೆಗ್ಡೆ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಜ್ಯೋತಿ ಹರೀಶ್, ಪಂಚಾಯತ್ ನಿಕಟಪೂರ್ವಾಧ್ಯಕ್ಷ ರಮೇಶ್ ಪೂಜಾರಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!