Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಜಿಲ್ಲಾ ಗೃಹರಕ್ಷಕ ದಳ ಕಚೇರಿಗೆ ಪ್ರವಾಹ ರಕ್ಷಣಾ ಸಾಮಗ್ರಿಗಳ ವಿತರಣೆ

0

ಉಡುಪಿ : ಬೆಂಗಳೂರಿನ ಡಿಜಿಪಿ ಕಚೇರಿಯಿಂದ ಉಡುಪಿ ಜಿಲ್ಲಾ ಗೃಹರಕ್ಷಕ ಕಚೇರಿಗೆ 2 ಇನ್‍ಫ್ಲೆಟೇಬಲ್ ಬೋಟ್, 1 ಒಬಿಎಂ ನೀಡಲಾಗಿದ್ದು, ಇದರೊಂದಿಗೆ ಉಡುಪಿ ಜಿಲ್ಲಾಡಳಿತ ನೀಡಿರುವ ರೈನ್‍ಕೋಟ್, ಲೈಫ್ ಜಾಕೆಟ್, ಟ್ಯೂಬ್, ಗಮ್‍ಬೂಟ್ ಮತ್ತು ಹಗ್ಗಗಳನ್ನು , ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು, ಪ್ರವಾಹ ಪೀಡಿತ ಸ್ಥಳಗಳಾದ ಪಡುಬಿದ್ರಿ ಮತ್ತು ಬ್ರಹ್ಮಾವರಕ್ಕೆ ಪಡುಬಿದ್ರಿ ಘಟಕಾಧಿಕಾರಿ ನವೀನ್ ಕುಮಾರ್, ಬ್ರಹ್ಮಾವರ ಘಟಕದ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಅವರಿಗೆ ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿ ಇಂದು ಸಾಂಕೇತಿಕವಾಗಿ ಹಸ್ತಾಂತರಿಸಿದರು.
ಪಡುಬಿದ್ರೆ ಮತ್ತು ಬ್ರಹ್ಮಾವರ ಎರಡು ಕಡೆ ತಲಾ 5 ರಂತೆ ಗೃಹರಕ್ಷಕ ಸಿಬ್ಬಂದಿ ಆಯಾ ಘಟಕದ ತಹಶೀಲ್ದಾರ್ ಅವರಲ್ಲಿ ವರದಿ ಮಾಡಿಕೊಂಡು ತುರ್ತು ಸಂದರ್ಭದಲ್ಲಿ ಇದು ಕರ್ತವ್ಯಕ್ಕೆ ಬಳಸಲಾಗುತ್ತದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಪಡುಬಿದ್ರಿ, ಕಾಪು, ಮಲ್ಪೆ, ಮರವಂತೆ ಬೀಚ್‍ಗೆ ತಲಾ ಇಬ್ಬರು ಗೃಹರಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ 50 ಪೆÇಲೀಸ್ ಠಾಣೆಗಳಲ್ಲಿ ಸರದಿ ಆಧಾರದಲ್ಲಿ ಎಪ್ರಿಲ್ ತಿಂಗಳಿನಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕೋವಿಡ್ ಮಾರ್ಷಲ್ ಕೆಲಸಕ್ಕೆಂದು 135 ಮಂದಿ ಗೃಹರಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಉಡುಪಿ ಅಗ್ನಿಶಾಮಕ ದಳದ
ಕಾರ್ಕಳ, ಕುಂದಾಪುರದಲ್ಲಿ 19, ಉಡುಪಿ ಆರ್‍ಟಿಒದಲ್ಲಿ 5, ಎನ್‍ಸಿಸಿ 2 ಮಂದಿ ಸರದಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಸಮಾದೇಷ್ಟರಾದ ಡಾ| ಪ್ರಶಾಂತ್ ಶೆಟ್ಟಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಗೃಹರಕ್ಷಕದಳದ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಪೂಜಾರಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಸಂತ್ ಕುಮಾರ್, ಕಾಪು ಘಟಕಾಧಿಕಾರಿ ಲಕ್ಷ್ಮೀ ನಾರಾಯಣ, ಕಚೇರಿ ಅಧೀಕ್ಷಕಿ ಕವಿತಾ, ಪ್ರ.ದ.ಸ. ಶ್ಯಾಮಲಾ ಹಾಗೂ ಗೃಹರಕ್ಷಕರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!