Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ತನ್ನನ್ನು ವಿರೋಧಿಸಿದ ವ್ಯಕ್ತಿಯನ್ನು ಕೊಲೆ ಮಾಡಿದ ಪಂಚಾಯತ್ ಅಧ್ಯಕ್ಷ ಪೊಲೀಸ್ ವಶಕ್ಕೆ

0

ವರದಿ : ಮಹೇಶ್

ಬೈಂದೂರು : ಲಾಕ್ ಡೌನ್ ಮಾಡಿದ ಗ್ರಾಮಕ್ಕೆ ಯಾವುದೇ ಅಗತ್ಯ ವಸ್ತುಗಳನ್ನು ನೀಡದೆ ಗ್ರಾಮಕ್ಕೆ ಬೇಲಿ ಹಾಕಿರುವುದನ್ನು ವಿರೋಧಿಸಿದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಡಮೊಗೆಯಲ್ಲಿ ನಡೆದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ‌. ಮೃತ ವ್ಯಕ್ತಿ ಉದಯ ಗಾಣಿಗ ಎಂದು ತಿಳಿದು ಬಂದಿದೆ. ಗ್ರಾಮ‌ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಆರೋಪಿ.

ಎರಡು ದಿನಗಳ ಹಿಂದೆ ಗ್ರಾಮ ಪಂಚಾಯತ್ ಲಾಕ್ಡೌನ್ ಬಗ್ಗೆ ಸ್ಟೇಟಸ್ ಹಾಕಿದ್ದ ಉದಯ ಗಾಣಿಗ ಗ್ರಾಮಸ್ಥರಿಗೆ ಪೂರಕ ವ್ಯವಸ್ಥೆ ಕಲ್ಪಿಸಿ ಊರಿಗೆ ಬೇಲಿ ಹಾಕಿ ಪೋಸು ಕೊಡಬೇಡಿ, ಕೊರೋನಾ ಪೀಡಿತ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿ ಆಮೇಲೆ ಪ್ರಚಾರ ತಗೊಳ್ಳಿ. ಸರಕಾರದ ಸಹಾಯ ಧನ ನುಂಗಬೇಡಿ ಎಂದು ಸ್ಟೇಟಸ್ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಂಜೆ ರಸ್ತೆಯಲ್ಲಿ ನಿಂತಿದ್ದ ಉದಯ ಗಾಣಿಗ ಮೇಲೆ ಗ್ರಾಮ‌ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಕಾರು ಢಿಕ್ಕಿ ಹೊಡೆಸಿ ಹತ್ಯೆ ಮಾಡಿದ್ದಾರೆ. ನಂತರ ಕಾರು ಬಿಟ್ಟು ಓಡಿ ಪರಾರಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ನಡೆಯ ಬಗ್ಗೆ ಯಾವಾಗಲೂ ವಿರೋಧಿಸುತ್ತಿದ್ದ ಉದಯ ಗಾಣಿಗನನ್ನು ಪ್ರಾಣೇಶ್ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕರು 108 ಅಂಬ್ಯುಲೆನ್ಸ್ ಮೂಲಕ ಕರೆದೊಯ್ಯುವ ಮಾರ್ಗ ಮಧ್ಯೆ ಉದಯ ಗಾಣಿಗ ಸಾವು ಸಂಭವಿಸಿದೆಂದು ತಿಳಿದು ಬಂದಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!