Connect with us

Hi, what are you looking for?

Diksoochi News

ಕರಾವಳಿ

ಏನೇ ಟೀಕೆಗಳನ್ನು ಮಾಡಿದರು ಸರಿ ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂದೂ ಧಾರ್ಮಿಕ ಸಂಸ್ಥೆಗಳಿಗಷ್ಟೇ ಅನುದಾನ: ಸಚಿವ ಕೋಟ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಧಾರ್ಮಿಕ ದತ್ತಿ ಇಲಾಖೆಯಿಂದ(ಸರ್ಕಾರ) ಕೊಡುವ ಅನುದಾನ ಕೇವಲ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿ ವಿನಿಯೋಗ ಮಾಡಬೇಕು ಎಂಬ ಕಾನೂನು ಧಾರ್ಮಿಕ ದತ್ತಿ ಇಲಾಖೆಯಲ್ಲಿದೆ. ಟೀಕೆ, ಟಿಪ್ಪಣಿ, ವಿಚಾರ, ಕಾನೂನು ಎಲ್ಲವನ್ನೂ ಗಮನಿಸಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಧಾರ್ಮಿಕ ದತ್ತಿ ಇಲಾಖೆಯ ಹಣ ಕೇವಲ ಹಿಂದೂ ದೇವಸ್ಥಾನಗಳಿಗೆ ಮಾತ್ರ ಸೀಮಿತವಾಗಿ ಖರ್ಚು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ.
ನನ್ನ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯ ಕಮಿಷ್ನರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಅನುಮತಿ ಕೊಡಲು ಕೋರಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಸಂಬಂಧ ಪಟ್ಟಂತಹ ದೇವಸ್ಥಾನಗಳಿಗೆ ಸೀಮಿತವಾಗಿ ಇಲಾಖೆಯ ಹಣ ಖರ್ಚು ಮಾಡುವಂತೆ ಇವತ್ತು ಅಥವಾ ನಾಳೆ ಆದೇಶ ಬರಲಿದೆ. ಈ ಬಗ್ಗೆ ಆತಂಕ ಬೇಡ. ಇತರ ಪ್ರಾರ್ಥನ ಮಂದಿರಗಳಿಗೆ ಆಯಾಯ ಇಲಾಖೆಗಳೇ ಕೊಡಬಹುದು ಎಂದು ಸೂಚಿಸಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

Advertisement. Scroll to continue reading.

ರಾಜ್ಯದಲ್ಲಿರುವ 34,500 ಹಿಂದೂ ಧರ್ಮದ ದೇವಸ್ಥಾನಗಳಲ್ಲಿ 27,000 ದೇವಸ್ಥಾನಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ವಾರ್ಷಿಕ 48,000 ರೂ.ನಂತೆ ಸುಮಾರು 133 ಕೋ.ರೂ. ಯನ್ನು ತಸ್ತಿಕ್ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಭೂಸುಧಾರಣೆ ಸಂದರ್ಭದಲ್ಲಿ ಭೂಮಿಯನ್ನು ಕಳೆದುಕೊಂಡ ಧಾರ್ಮಿಕ ಕೇಂದ್ರಗಳಿಗೆ ವರ್ಷಾಸನ ರೂಪದಲ್ಲಿ ಇತರ ಅನುದಾನಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಮಧ್ಯೆ ವ್ಯಾಪಕ ಟೀಕೆ ಕೇಳಿಬಂದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಂದ ವರದಿ ತರಿಸಿಕೊಂಡಿದ್ದು ಮಾಹಿತಿ ಪಡೆದಿದ್ದೇನೆ. 27,000 ದೇವಸ್ಥಾನಗಳ ಪೈಕಿ 764 ದೇವಸ್ಥಾನಗಳಿಗೆ ಹಿಂದುಯೇತರ ದೇವಸ್ಥಾನಗಳು, ಧಾರ್ಮಿಕ ಕೇಂದ್ರಗಳು, ಪ್ರಾರ್ಥನಾ ಮಂದಿಗಳು ಮತ್ತು ಬಸದಿಗಳಿಗೆ ಇಲಾಖೆಯಿಂದ ವಾರ್ಷಿಕ ತಸ್ತಿಕ್ ಹೋಗುತ್ತದೆ. 114 ಸಂಸ್ಥೆಗಳಿಗೆ ವರ್ಷಾಸನ ಹೋಗುತ್ತದೆ ಎಂದು ಅವರು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!