Connect with us

Hi, what are you looking for?

ಕರಾವಳಿ

ಕುಂದಾಪುರ: ಪೆಟ್ರೋಲ್ , ಡೀಸೆಲ್, ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕೋವಿಡ್ 2 ನೇ ಅಲೆಯಲ್ಲಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಮನೆ ಮಂದಿಯೆಲ್ಲಾ ಸೊಂಕಿಗೆ ತುತ್ತಾಗಿ ದೊಡ್ಡ ಪ್ರಮಾಣದಲ್ಲಿ ವೈದ್ಯಕೀಯ ವೆಚ್ಚ ಭರಿಸಿ ಪ್ರಾಣಗಳನ್ನು ಉಳಿಸಿ ಕೊಳ್ಳುತ್ತಿದ್ದಾರೆ. ಇನ್ನೂ ಸಾಕಷ್ಟು ಜನ ಹಣ ಖರ್ಚು ಮಾಡಿ ಪ್ರಾಣವನ್ನು ಕಳೆದು ಕೊಂಡಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದ್ದು, ಹೀಗೆ ಜನರು ಆರ್ಥಿಕ ಸಂಕಷ್ಟದಲ್ಲಿರುವಾಗ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ದರ ಏರಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ ನೀತಿಯಾಗಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ವ್ಯಾಪಿ ಪ್ರತಿಭಟನೆಯ ಅಂಗವಾಗಿ ಕುಂದಾಪುರದ ಹಂಚು ಕಾರ್ಮಿಕ ಭವನ, ನಾಡ, ಹಡವು ಗ್ರಾಮದ ಮನೆ ಮನೆಗಳಲ್ಲಿ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿ ಖಂಡಿಸಲಾಯಿತು.

ಕೋವಿಡ್ 2 ನೇ ಅಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ 8 ರಷ್ಟಿದ್ದ ನಿರುದ್ಯೋಗ ದ ಪ್ರಮಾಣ ಮೇ ಒಂದೇ ತಿಂಗಳಲ್ಲಿ ಶೇ 12 ಕ್ಕೆ ಏರಿಕೆಯಾಗಿದ್ದು, ಅಡುಗೆ ಗ್ಯಾಸ್ 812, ತೋಗರಿಬೇಳೆ 160, ಅಡುಗೆ ಎಣ್ಣೆ 180 ರೂ ಆಗಿದೆ. ಇದರ ಜೊತೆಯಲ್ಲಿ ಪೆಟ್ರೋಲ್ – ಡೀಸಲ್ ಧರ ಒಂದು ತಿಂಗಳ ಅವಧಿಯಲ್ಲಿ 18 ಭಾರಿ ಏರಿಕೆಯಾಗಿದ್ದು, ಇದ್ದರಿಂದ ಸರಕು ಸಾಗಣೆಗಳ ವೆಚ್ಚದಲ್ಲಿ ಏರಿಕೆಯಾಗುವ ಕಾರಣ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿ ಇದರ ಹೊರೆ ಜನ ಸಾಮಾನ್ಯ ರ ಮೇಲೆ ಬೀಳಲಿದೆ. ಇದು ಸಾಲದೆಂಬಂತೆ ಇದರ ಜೊತೆಯಲ್ಲಿಯೇ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ದರ ಏರಿಸುವ ಮೂಲಕ ರಾಜ್ಯ ಸರ್ಕಾರ ಜನರನ್ನು ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ.

ಈಗಾಗಲೇ ಕೋವಿಡ್ 2 ನೇ ಅಲೆಯಿಂದ ಶೇ 97% ರಷ್ಟು ಕುಟುಂಬಗಳ ಆದಾಯ ಕುಸಿತ ಕಂಡಿದೆಯೆಂದು ಭಾರತೀಯ ಆರ್ಥಿಕ ನಿಗಾ ಕೇಂದ್ರ ಹೇಳಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಪೆಟ್ರೋಲ್ ಡೀಸೆಲ್ ಹಾಗೂ ವಿದ್ಯುತ್ ಧರ ಏರಿಕೆ ಮಾಡಿರುವುದು ಅಮಾನವೀಯ ನಡೆಯಾಗಿದೆಯೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಭಿಪ್ರಾಯ ಪಟ್ಟಿದೆ. ಹಾಗಾಗಿ ಏರಿಸಿರುವ ಪೆಟ್ರೋಲ್ ಡೀಸಲ್ ಹಾಗೂ ವಿದ್ಯುತ್ ದರವನ್ನು ಕೂಡಲೆ ವಾಪಾಸ್ಸು ಪಡೆಯಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಅಧ್ಯಕ್ಷರಾದ ಆರತಿ ಲಾಲು ಪ್ರಸನ್ನ, ಕಾರ್ಯದರ್ಶಿ ಶೀಲಾವತಿ, ಮುಖಂಡರಾದ ಬಲ್ಕೀಸ್, ನಾಗರತ್ನ ನಾಡ, ಅಶ್ವಿನಿ ಮೊದಲಾದವರು ಭಾಗವಹಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!