ಉಡುಪಿ : ಜಿಲ್ಲೆಯಲ್ಲಿ ಅನ್ ಲಾಕ್ ಘೋಷಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಹಾಗಾಗಿ ಇಂದಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿವೆ. ಶೇ. 50 ರಷ್ಟು ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು. ಸೋಮವಾರದಿಂದಲೇ ಸರ್ಕಾರಿ ಬಸ್ಗಳ ಓಡಾಟ ಆರಂಭವಾಗಿದೆ.
ಉಡುಪಿ ನಗರದಿಂದ ಬೈಂದೂರು, ಕುಂದಾಪುರ, ಕಾರ್ಕಳ, ಮಂಗಳೂರು ಮುಂತಾದ ಕಡೆಗೆ ಬಸ್ಗಳು ಶೇ. 50 ರಷ್ಟು ಪ್ರಯಾಣಿಕರೊಂದಿಗೆ ತೆರಳಿವೆ. ಆದರೆ ಖಾಸಗಿ ಬಸ್ ಗಳು ಸಂಚರಿಸುತ್ತಿಲ್ಲ. ಸುಮಾರು 50 ದಿನಗಳ ಕಾಲ ಬಸ್ಗಳನ್ನು ನಿಲ್ಲಿಸಿರುವುದರಿಂದ ಅವುಗಳ ರಿಪೇರಿ ನಡೆಸಬೇಕು. ಬಸ್ಸು ಟಿಕೇಟು ದರ ಹೆಚ್ಚಿಸಲು ಅವಕಾಶ ನೀಡಬೇಕು ಎಂದು ಖಾಸಗಿ ಬಸ್ಸು ಮಾಲೀಕರು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.