Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ; ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

0

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ, ಹಿಂದುಳಿದ ವರ್ಗಗಳ ಮೋರ್ಚಾ ಬೈಂದೂರು ಮಂಡಲ ಇವರ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾನ್ಕಟ್ಟು ಶ್ರೀ ಹೊನ್ನಮ್ಮ ದೇವಿ ದೇವಸ್ಥಾನ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ ಪೂಜಾರಿ ಮುಕ್ಕೋಡು ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಶೆಟ್ಟಿ ಹಡಾಳಿ, ಬೈಂದೂರು ಮಂಡಲ ಉಪಾಧ್ಯಕ್ಷ ಸಾಮ್ರಾಟ್ ಶೆಟ್ಟಿ ಹಳ್ನಾಡು, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಅಶೋಕ ಕೆ. ಅಂಪಾರು, ಅ.ವ್ಯ.ಸೆ.ಸ. ಸಂಘದ ಅಧ್ಯಕ್ಷ ಗೋಪಾಲ ಕೃಷ್ಣ ಕಿಣಿ, ಅಂಪಾರು ಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರ ಜೋಗಿ ಶಾನ್ಕಟ್ಟು, ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳಾದ ಉಮೇಶ್ ಮೊಗವೀರ ಕಂಡ್ಲೂರು, ಸಂತೋಷ ಕುಲಾಲ್ ಮಾವಿನಮನೆ, ಸಂತೋಷ ಭೋವಿ ಶಾನ್ಕಟ್ಟು, ಸಿದ್ದಾಪುರ ಮಹಾ ಶಕ್ತಿ ಕೇಂದ್ರದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ ಪೂಜಾರಿ, ಕಾವ್ರಾಡಿ ಮಹಾ ಶಕ್ತಿ ಕೇಂದ್ರದ ಒಬಿಸಿ ಮೋರ್ಚಾದ ಕಾರ್ಯದರ್ಶಿ ಮಹೇಂದ್ರ ಭೋವಿ, ಕಾವ್ರಾಡಿ ಮಹಾ ಶಕ್ತಿ ಕೇಂದ್ರದ ಯುವ ಮೋರ್ಚಾದ ಅಜಿತ್ ನೆಲ್ಲಿಕಟ್ಟೆ, ರಂಜಿತ್, ಮುಖಂಡರಾದ ಕುಷ್ಠ ಭೋವಿ ಶಾನ್ಕಟ್ಟು, ಪಂಚಾಯತ್ ಸದಸ್ಯರಾದ ನವೀನ್ ಕುಮಾರ್ ಶೆಟ್ಟಿ ಹೊಸಿಮನೆ, ಜಯಲಕ್ಷ್ಮಿ ಶೆಡ್ತಿ, ಹಾಗೂ ಬೂತ್ ಅಧ್ಯಕ್ಷರು ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!