ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬ್ರಹ್ಮಾವರ, ಬಾರಕೂರು ವಲಯದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಕಾರ್ಯಕ್ರಮ ಬಾರಕೂರು ಹಿಂದೂ ರುದ್ರ ಭೂಮಿಯಲ್ಲಿ ನಡೆಯಿತು. ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಾಂತರಾಮ ಶೆಟ್ಟಿಯವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ವಲಯ ಮೇಲ್ವಿಚಾರಕಿ ಶಾಂತ, ಕಾರ್ಯಕ್ರಮದ ಉದ್ದೇಶ ಹಾಗೂ ಗಿಡದ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಾರ್ಕೂರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ, ಪಂಚಾಯತ್ ಸದಸ್ಯ ಶರಣು , ಬಾರ್ಕೂರು ವಲಯ ಒಕ್ಕೂಟ ಅಧ್ಯಕ್ಷ ಗೌರಿ ಪೂಜಾರ್ತಿ, ವಿಪತ್ತು ನಿರ್ವಹಣೆಯ ತಂಡಕ್ಕೆ ಆಯ್ಕೆಯಾದ ಸದಸ್ಯರು, ಬಾರ್ಕೂರು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ರುದ್ರಭೂಮಿ ಆವರಣವನ್ನು ಸ್ವಚ್ಛಗೊಳಿಸಿ, ವಿವಿಧ ಔಷಧಿ ಗಿಡಗಳು ಹಾಗೂ ಇತರ ಗಿಡಗಳನ್ನು ನೆಟ್ಟು ಗಿಡಗಳಿಗೆ ಬೇಲಿ ಹಾಕಲಾಯಿತು.
ಸೇವಾಪ್ರತಿನಿಧಿ ಪೂರ್ಣಿಮ ಸ್ವಾಗತಿಸಿದರು. ಗೌರಿ ಪೂಜಾರಿ ವಂದಿಸಿದರು.