Connect with us

Hi, what are you looking for?

Diksoochi News

ರಾಜ್ಯ

ಕಾರವಾರ : ಕಾಸರಕೋಡಿನ ವಾಣಿಜ್ಯ ಬಂದರು ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತೆ ಆರಂಭ; ಮೀನುಗಾರರಿಂದ ಆತ್ಮಹತ್ಯೆಗೆ ಯತ್ನ

0

ಕಾರವಾರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹೊನ್ನಾವರದ ಕಾಸರಕೋಡಿನ ವಾಣಿಜ್ಯ ಬಂದರು ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತೆ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಆತಂಕಗೊಂಡ  ಮೀನುಗಾರರು, ಬೃಹತ್ ಪ್ರತಿಭಟನೆ ನಡೆಸಿದ್ದಲ್ಲದೇ ಯುವಕರು ಸಮುದ್ರಕ್ಕೆ ಹಾರಿ ಸಾಮೂಹಿಕ ಆತ್ಮಹತ್ಯೆ ನಡೆಸಲು ಯತ್ನಿಸಿರುವ ಘಟನೆ ಶನಿವಾರ ನಡೆದಿದೆ. ಹೊನ್ನಾವರ ತಾಲ್ಲೂಕಿನ ಕಾಸರಕೊಡು ಟೊಂಕಾ ಭಾಗದ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಎಚ್ ಪಿಪಿಎಲ್ ಕಂಪನಿ ವಾಣಿಜ್ಯ ಬಂದರು ನಿರ್ಮಿಸುತ್ತಿದೆ. ಸರ್ಕಾರ ವಾಣಿಜ್ಯ ಬಂದರು ನಿರ್ಮಾಣಕ್ಕೆ 93 ಎಕರೆ  ಮಂಜೂರು ಮಾಡಿದೆ. ಕೆಲವು ತಿಂಗಳ ಹಿಂದೆ ವಾಣಿಜ್ಯ ಬಂದರು ಕಾಮಗಾರಿ ಪ್ರಾರಂಭಿಸಿದ್ದ ಕಂಪನಿ ಸ್ಥಳೀಯರ ವಿರೋಧದಿಂದ ಸ್ಥಗಿತಗೊಳಿಸಿತ್ತು. ಆದರೆ ಶನಿವಾರ ಬೆಳ್ಳಂಬೆಳಿಗ್ಗೆ ಮತ್ತೆ ಸಾವಿರಾರು ಪೊಲೀಸರ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆಯಿಂದಲೇ ಸುರಿಯುವ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕಾಮಗಾರಿ ಸ್ಥಗಿತಗೊಳಿಸದ ಹಿನ್ನೆಲೆಯಲ್ಲಿ ಕೆಲವು ಯುವಕರು ಸಮುದ್ರಕ್ಕೆ ಹಾರಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಯುವಕರನ್ನು ತಡೆದಿದ್ದು, ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!