Connect with us

Hi, what are you looking for?

ಸಿನಿಮಾ

ಪುನೀತ್ – ಪವನ್ ಕಾಂಬಿನೇಷನ್ ನಲ್ಲಿ ಮೂಡಿ ಬರಲಿರೋ ಚಿತ್ರದ ಟೈಟಲ್ ಅನಾವರಣಕ್ಕೆ ದಿನಾಂಕ ನಿಗದಿ

0

ಚಂದನವನ : ನಿರ್ದೇಶಕ ಪವನ್ ಕುಮಾರ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರಲಿದೆ ಅನ್ನೋದು ಹಳೇ ವಿಚಾರ . ಆ ಬಳಿಕ ಚಿತ್ರದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ. ಸ್ಯಾಂಡಲ್ ವುಡ್ ನ ಪ್ರತಿಷ್ಟಿತ ಹೊಂಬಾಳೆ ಫಿಲಮ್ಸ್ ಬ್ಯಾನರ್ ನಲ್ಲಿ ಈ ಸಿನಿಮಾ ಮೂಡಿಬರುತ್ತಿದ್ದು, ಇದೀಗ ಈ ಚಿತ್ರದ ಬಗ್ಗೆ ಅಪ್ಡೇಟ್ ಹೊರ ಬಿದ್ದಿದೆ. ಹೊಸ ಚಿತ್ರದ ಶೀರ್ಷಿಕೆಯನ್ನು ಜುಲೈ 1 ರ ಬೆಳಗ್ಗೆ 11.46ಕ್ಕೆ ಬಿಡುಗಡೆ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ. ಈ ಬಗ್ಗೆ ಪವನ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಪವನ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಇವರಿಬ್ಬರ ಕಾಂಬಿನೇಷನ್ ನಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ವಿಭಿನ್ನ ಚಿತ್ರಗಳನ್ನು ನೀಡಿರೋ ಪವನ್, ಪುನೀತ್ ರಾಜ್ ಕುಮಾರ್ ಅವರನ್ನು ಯಾವ ಪಾತ್ರದ ಮೂಲಕ ಕನ್ನಡಿಗರ ಮುಂದೆ ಪ್ರಚುರ ಪಡಿಸಲಿದ್ದಾರೆ ಅನ್ನೋದು ಬಹುದೊಡ್ಡ ಕುತೂಹಲವಾಗಿದೆ.

ಪವನ್ ಕುಮಾರ್ ಈಗಾಗಲೇ ‘ಲೂಸಿಯ’, ‘ಯು ಟರ್ನ್’ ಅಂಥ ವಿಭಿನ್ನ ಸಿನಿಮಾಗಳನ್ನು ನೀಡಿರುವ ಚಂದನವನದ ಪ್ರತಿಭಾವಂತ ನಿರ್ದೇಶಕ. ಜೊತೆಗೆ ನಟನೆಯಲ್ಲೀ ತೊಡಗಿಕೊಂಡಿದ್ದು, ಗಾಳಿಪಟ 2 ನಲ್ಲಿ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಸಂಯೋಜನೆಯಲ್ಲಿ ಪುನೀತ್ ಅವರಿಗೆ ಇದು ಎರಡನೇ ಸಿನಿಮಾ ಇದಾಗಿದ್ದು, ಮೊದಲು ಸಿನಿಮಾ ಯುವರತ್ನ ದಲ್ಲಿ ಇವರು ಒಟ್ಟಿಗೆ ಕೆಲಸ ಮಾಡಿದ್ದರು. ಸದ್ಯ ಜೇಮ್ಸ್ ಸಿನಿಮಾದಲ್ಲಿ ಪವರ್ ಸ್ಟಾರ್ ಬ್ಯುಸಿಯಾಗಿದ್ದು, ಸಿನಿಮಾದ ಬಹುತೇಕ ಚಿತ್ರಕರಣ ಮುಕ್ತಾಯವಾಗಿದೆ. ಈ ಚಿತ್ರ ಮುಗಿಯುತ್ತಿದ್ದಂತೆ ಪವನ್ ಕುಮಾರ್ ಜೊತೆ ಹೊಸ ಚಿತ್ರ ಪ್ರಾರಂಭ ಮಾಡಲಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!