Connect with us

Hi, what are you looking for?

Diksoochi News

ರಾಜ್ಯ

ಉಡುಪಿ : ಜಿಲ್ಲಾಡಳಿತಕ್ಕೆ ಇನ್ಫೋಸಿಸ್ ನಿಂದ 70 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣ ಹಸ್ತಾಂತರ

0

ಉಡುಪಿ : ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸ್‍ನ್‍ಟ್ರೇಟರ್ ಹಾಗೂ 10 ವೆಂಟಿಲೇಟರ್‍ಗಳನ್ನು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ ವತಿಯಿಂದ ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಕೂಡಲೇ ಸ್ಪಂದಿಸಿ ಅಗತ್ಯವಿದ್ದ ಅರೋಗ್ಯ ಸಾಮಗ್ರಿಗಳನ್ನು ನೀಡಲಾಗಿದ್ದು, ಕೋವಿಡ್ 2 ನೇ ಅಲೆಯ ಈ ಸಮಯದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ, ಅಕ್ಸಿಜನ್ ಕಾನ್ಸನ್‍ಟ್ರೇಟರ್ ಮತ್ತು ವೆಂಟಿಲೇಟರ್‍ಗಳನ್ನು ನೀಡಿದ್ದು, ಸಂಸ್ಥೆಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಪ್ರಸ್ತುತ ನೀಡಿರುವ ಉಪಕರಣಗಳಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ 5 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‍ಟ್ರೇಟರ್, ಕುಂದಾಪುರ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‍ಟ್ರೇಟರ್, ಕಾರ್ಕಳ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್‍ಟ್ರೇಟರ್ ಗಳನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಇನ್ಫೋಸಿಸ್ ಮಂಗಳೂರು ವಿಭಾಗದ ಮ್ಯಾನೇಜರ್ ಗಳಾದ ವಾಸುದೇವ ಕಾಮತ್ ಮತ್ತು ಸಂದೀಪ್ ಡಿಸಿಲ್ವಾ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!