Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬಾಳೆಕುದ್ರು ಶ್ರೀ ಮಠದಲ್ಲಿ ನಾಟಿ ಕಾರ್ಯ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಭಾಗವತ ಸಂಪ್ರದಾಯದ ಅತೀ ಪ್ರಾಚೀನವಾದ ಬ್ರಹ್ಮಾವರ ಬಳಿಯ ಬಾಳೆಕುದ್ರು ಶ್ರೀ ಮಠ ಋಷಿ ಪರಂಪರೆಯ ಜೊತೆಗೆ ಕೃಷಿ ಪರಂಪರೆಯನ್ನು ಇಂದಿಗೂ ಕೂಡಾ ಮುಂದುವರಿಸಿಕೊಂಡು ಬರುತ್ತಿದೆ. ಇಲ್ಲಿನ ಪರಂಪರೆಯ ಗುರುಗಳಾದ ನೃಸಿಂಹಾಶ್ರಮ ಸ್ವಾಮೀಜಿಯವರು ಮಠದಲ್ಲಿ ಬಂಜರಾಗಿದ್ದ 5 ಎಕ್ರೆ ಕೃಷಿ ಭೂಮಿಯಲ್ಲಿ ಭತ್ತದ ಬೆಳೆಯನ್ನು ತೀರಾ ಆಸಕ್ತಿಯಿಂದ ಮಾಡುತ್ತಿದ್ದಾರೆ.
ಪೂರ್ವಾಶ್ರಮದಲ್ಲಿ ಕೃಷಿ ಕುರಿತು ತೀರಾ ಆಸಕ್ತಿ ಇದ್ದ ನೃಸಿಂಹಾಶ್ರಮ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮಠದ ಆವರಣದಲ್ಲಿ 250 ಟ್ರೇಯಲ್ಲಿ ಭತ್ತದ ಬೀಜವನ್ನು ಹಾಕಿ ಮಾಡಲಾದ ಚಾಪೆ ನೇಜಿಯನ್ನು ಬುಧವಾರ ಇಲ್ಲಿನ ಗದ್ದೆಯಲ್ಲಿ ಯಾಂತ್ರಿಕೃತವಾಗಿ ನಾಟಿ ಮಾಡಲಾಯಿತು.

ಕೆಲವು ದಿನದ ಹಿಂದೆ ಟಿಲ್ಲರ್ ಮೂಲಕ ಉಳುಮೆ ಮಾಡಿ ಹದಗೊಳಿಸಿದ ಗದ್ದೆಯಲ್ಲಿ 2 ನಾಟಿ ಯಂತ್ರಗಳಿಂದ ನಾಟಿ ಮಾಡಲಾಯಿತು. ಈ ಸಂದರ್ಭ ಸ್ವತಹ: ಶ್ರೀಗಳು ನಾಟಿ ಮಾಡುವಲ್ಲಿ ಬಂದು ಮಾರ್ಗದರ್ಶನ ನೀಡಿದರು. ಈ ಹಿಂದೆ ಮಾನವ ಆಳುಗಳ ಮೂಲಕ ಮಾಡಲಾಗುತ್ತಿದ್ದ ಭತ್ತದ ನಾಟಿಯನ್ನು ಕಳೆದ 3 ವರ್ಷದಿಂದ ಯಾಂತ್ರೀಕೃತವಾಗಿ ಮಾಡಲಾಗುತ್ತಿದೆ. ಭತ್ತದ ಬೆಳೆಯಿಂದ ಬರುವ ಹುಲ್ಲುಗಳನ್ನು ಇಲ್ಲಿನ ಗೋಶಾಲೆಯಲ್ಲಿ ಇರುವ ದೇಶೀ ತಳಿಗಳ ಗೋವುಗಳಿಗೆ ಬಳಸಲಾಗುತ್ತಿದೆ.

ಕೃಷಿ ಮತ್ತು ಬೇಸಾಯದಲ್ಲಿ ಲಾಭ ನಷ್ಟದ ಲೆಕ್ಕಾಚಾರ ಹಾಕುವ ಇಂದಿನ ದಿನದಲ್ಲಿ ಋಷಿ ಪರಂಪರೆಯ ಮಠವೊಂದು ಕೃಷಿಗೆ ಮಹತ್ವಿಕೆ ನೀಡುತ್ತಿರುವುದು ಮಾದರಿಯಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!