Connect with us

Hi, what are you looking for?

Diksoochi News

ರಾಜ್ಯ

ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

0

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಭಾನುವಾರದಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಚ ನ್ಯಾಯಾಲಯ ದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಅವರು ಓಕಾ ಥಾವರ್ ಚಂದ್ ಗೆಹ್ಲೋಟ್‌ಗೆ ಆಡಳಿತ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ವ್ಯಕ್ತಿ ಗಳು ಈ ಪ್ರಮಾಣ ವಚನ ಸ್ವೀಕಾರದಲ್ಲಿ ಭಾಗಿಯಾಗಿದ್ದರು. ಜುಲೈ 6ರಂದು ಕರ್ನಾಟಕದ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕ ಥಾವರ್ ಚಂದ್ ಗೆಹ್ಲೋಟ್‌ರನ್ನು ನೇಮಕ ಮಾಡಲಾಗಿತ್ತು. 2014ರ ಸೆಪ್ಟೆಂಬರ್‌ನಿಂದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿದ್ದರು. ಇವರ 5 ವರ್ಷದ ಅಧಿಕಾರ ಅವಧಿ ಪೂರ್ಣಗೊಂಡಿದ್ದರೂ ಹೊಸ ರಾಜ್ಯಪಾಲರ ನೇಮಕವಾಗಿರಲಿಲ್ಲ.

ಥಾವರ್ ಚಂದ್ ಗೆಹ್ಲೋಟ್‌ ಮಧ್ಯಪ್ರದೇಶ ಮೂಲದವರಾಗಿದ್ದು ರಾಜ್ಯಸಭಾ ಸದಸ್ಯರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು. ನಾಲ್ಕು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯಪಾಲರಾಗಿ ಆಯ್ಕೆಯಾದ ಬಳಿಕ ಕೇಂದ್ರ ಸಚಿವ ಸ್ಥಾನಕ್ಕೆ ಮತ್ತು ರಾಜ್ಯಸಭಾ ಸದಸ್ಯತ್ವ
ಗೆಹ್ಲೋಟ್‌ ರಾಜೀನಾಮೆ ನೀಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!