Connect with us

Hi, what are you looking for?

Diksoochi News

Uncategorized

ವಿಶ್ವಕಪ್‌ ವಿಜೇತ ಮಾಜಿ ಕ್ರಿಕೆಟಿಗ ಯಶ್‌ಪಾಲ್ ಶರ್ಮಾ ನಿಧನ

0

ಜುಲೈ : ಟೀಮ್ ಇಂಡಿಯಾದ ವಿಶ್ವಕಪ್‌ ವಿಜೇತ ಮಾಜಿ ಕ್ರಿಕೆಟರ್ ಯಶ್‌ಪಾಲ್‌ ಶರ್ಮಾ(66) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
70 ಮತ್ತು 80ನೇ ದಶಕದ ವೇಳೆ ಯಶ್‌ಪಾಲ್‌ ಶರ್ಮಾ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿದ್ದರು. ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಮೂಲಕ 1979ರಲ್ಲಿ ಪದಾರ್ಪಣೆ ಮಾಡಿದ್ದ ಯಶ್‌ಪಾಲ್, 1978ರಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
1983ರ ವಿಶ್ವಕಪ್‌ ವೇಳೆ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧದ 61 ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಪಾತ್ರರಾಗಿದ್ದರು. ಭಾರತ ತಂಡದ ಪರ ಯಶ್‌ಪಾಲ್ 37 ಟೆಸ್ಟ್‌ ಪಂದ್ಯ, 42 ಏಕದಿನ ಪಂದ್ಯಗಳನ್ನಾಡಿದ್ದಾರೆ.

ಯಶ್‌ಪಾಲ್ ಶರ್ಮಾ ಅವರು 37 ಟೆಸ್ಟ್‌ ಪಂದ್ಯಗಳಲ್ಲಿ 1606 ರನ್, 2 ಶತಕ, 9 ಅರ್ಧ ಶತಕ. 42 ಏಕದಿನ ಪಂದ್ಯಗಳಲ್ಲಿ 883 ರನ್, 4 ಅರ್ಧ ಶತಕ ಬಾರಿಸಿದ್ದಾರೆ. ಇನ್ನು ಲಿಸ್ಟ್‌ ಎ 74 ಪಂದ್ಯಗಳಲ್ಲಿ 1859 ರನ್, 160 ಪ್ರಥಮದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ 893 ರನ್ ಗಳ ದಾಖಲೆಯನ್ನು ಹೊಂದಿದ್ದಾರೆ.

ಶರ್ಮಾ ಮಡದಿ ರೇಣು ಶರ್ಮಾ, ಇಬ್ಬರು ಪುತ್ರಿಯರಾದ ಪೂಜಾ, ಪ್ರೀತಿ ಮತ್ತು ಒಬ್ಬ ಪುತ್ರ ಚಿರಾಗ್ ಶರ್ಮಾ ಅವರನ್ನು ಶರ್ಮಾ ಅಗಲಿದ್ದಾರೆ.

ಕ್ರಿಕೆಟ್ ನಿವೃತ್ತಿಹೊಂದಿದ ಬಳಿಕ ಶರ್ಮಾ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ), ಪಂಜಾಬ್ ಮತ್ತು ಹರ್ಯಾಣ ಕ್ರಿಕೆಟ್‌ನಲ್ಲಿ ಬೇರೆ ಬೇರೆ ಕರ್ತವ್ಯಗಳನ್ನು ನಿಭಾಯಿಸಿದ್ದಾರೆ. ಕ್ರಿಕೆಟ್ ವಿಶ್ಲೇಷಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!