ವರದಿ : ಶ್ರೀದತ್ತ ಹೆಬ್ರಿ
ಮುದ್ರಾಡಿ : ಕೇಂದ್ರ ಸರಕಾರದ ಮೋದಿಜಿಯವರ ಜನ ಪರ ಅಭಿವೃದ್ಧಿ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಮತ್ತು ನಮ್ಮ ಶಾಸಕರಾದ ಸುನಿಲ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮುದ್ರಾಡಿ ಗ್ರಾಮದ ಕಾಂಗ್ರೆಸ್ ಬೆಂಬಲಿತ 4 ಬಾರಿ ಆಯ್ಕೆಯಾಗಿದ್ದ ಮಾಜಿ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಹಿಂದಿನ ಕಾಂಗ್ರೆಸ್ ಬೆಂಬಲಿತ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಆಗಿದ್ದ ಯಶೋದ ಶೆಟ್ಟಿ ಮುದ್ರಾಡಿ ಅವರು ಶಾಸಕ ಸುನಿಲ್ ಕುಮಾರ್ ಹಾಗೂ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಹಾವೀರ ಹೆಗ್ಡೆ ಪಕ್ಷದ ಧ್ವಜ ನೀಡುವುದರ ಮೂಲಕ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡರು.
ಮುದ್ರಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಹೆಗ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಮಾಜಿ ಜಿಲ್ಲಾ ಪಂ ಸದಸ್ಯ ಸುಮಿತ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.