ಉಡುಪಿ : ಡಿಗ್ರಿ, ಡಿಪ್ಲೋಮಾ, ವಿಟಿಯು ಪರೀಕ್ಷೆಗಳನ್ನು ನಡೆಸಲು ಸರ್ಕಾರ ಮುಂದಾಗಿದ್ದು, ಪರೀಕ್ಷೆಗಳನ್ನು ರದ್ದು ಮಾಡಿ ಮುಂದಿನ ಸೆಮಿಷ್ಟರ್ ಗೆ ತೇರ್ಗಡೆಗೊಳಿಸಬೇಕು ಎಂದು ಆಗ್ರಹಿಸಿ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಮಣಿಪಾಲದ ಟೈಗರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು.
ಕೊರೋನಾ ಕಾರಣದಿಂದಾಗಿ ಮನೆಯ ಹಿರಿಯರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು. ತೈಲ ಬೆಲೆ ಹೆಚ್ಚಿರುವುದರಿಂದ ಬಸ್ ದರ ಹೆಚ್ಚಿಸಿರುವುದು ಕೂಡ ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. 2 ಡೋಸ್ ವ್ಯಾಕ್ಸಿನೇಷನ್ ಆಗದೆ ಕಾಲೇಜು ಆರಂಭಿಸಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
Advertisement. Scroll to continue reading.