Connect with us

Hi, what are you looking for?

Diksoochi News

Uncategorized

ಬೈಂದೂರು : ಕಿರು ದ್ವೀಪದ ವಿದ್ಯಾರ್ಥಿಗಳ ಕಷ್ಟಕ್ಕೆ ಮರುಗಿದ ಡಿಡಿಪಿಐ, ತಹಶೀಲ್ದಾರ್; ವಿದ್ಯಾರ್ಥಿಗಳನ್ನು ದೋಣಿ ಮೂಲಕ ಕರೆತಂದ ಅಧಿಕಾರಿಗಳು

0

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ. ಅದರಂತೆಯೇ ಪರೀಕ್ಷೆ ಬರೆಯಲು ಹೊರಟ ಮರವಂತೆಯ ಕಿರು ದ್ವೀಪದ ವಿದ್ಯಾರ್ಥಿಗಳ ಪಯಣವೂ ಭಿನ್ನವಾಗಿತ್ತು. ಇಲ್ಲಿನ ವಿದ್ಯಾರ್ಥಿಗಳು ದೋಣಿಯ ಮೂಲಕಾನೇ ಸಂಚರಿಸುವುದು ಎಂದಿನ ಗೋಳಾಗಿದೆ. ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಇದೀಗ ಸೌಪರ್ಣಿಕಾ ನದಿ ಉಕ್ಕಿ ಹರಿಯುತ್ತಿದೆ. ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗಳಿಗೆ ಖುದ್ದು ಡಿಡಿಪಿಐ ಎಚ್.ಎನ್ ನಾಗೂರ ಹಾಗೂ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಮೇಲೇರಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಮರವಂತೆ ರಾ.ಹೆದ್ದಾರಿಯಿಂದ ಅರ್ಧ ಕಿ.ಮೀ ಬಯಲು ದಾರಿಯಲ್ಲಿ ನಡೆದು ಆ ಬಳಿಕ ದೋಣಿ ಮೂಲಕ ಕುರುವಿಗೆ ಪ್ರಯಾಣ ಬೆಳೆಸಿ ಮತ್ತೆ ಅದೇ ದೋಣಿಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಬಿಟ್ಟು ನೆರವಾಗಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ವಲಯದ ಮರವಂತೆ ಸರಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ `ಕಿರು’ ದ್ವೀಪದಲ್ಲಿದೆ. ಇಲ್ಲಿಂದ ಊರಿಂದಾಚೆಗೆ ಬರಬೇಕೆಂದರೆ ಒಂದೇ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ. ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಅಧಿಕ ದಾರಿ ನಡೆದುಕೊಂಡೆ ಕ್ರಮಿಸಿಬೇಕು. ನಿರಂತರ ಸುರಿದ ಭಾರೀ ಮಳೆಯಿಂದಾಗಿ ಪರೀಕ್ಷೆ ಬರೆಯಲು ಬರಲು ಈ ವಿದ್ಯಾರ್ಥಿನಿಯರಿಗೆ ತುಂಬಾ ಸಮಸ್ಯೆಯಾಗಿತ್ತು. ಈ ಬಗ್ಗೆ ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದ್ದು, ಶಿಕ್ಷಣ ಇಲಾಖೆ ಮಕ್ಕಳನ್ನು ಕರೆತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಇದಕ್ಕಾಗಿಯೇ ಇಬ್ಬರು ಶಿಕ್ಷಕರನ್ನು ನಿಯೋಜಿಸಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ.

ಸುಮಾರು ನಲವತ್ತು ಎಕರೆ ವಿಸ್ತೀರ್ಣವಿರುವ ಕಿರು ದ್ವೀಪದಲ್ಲಿ ಬ್ರಾಹ್ಮಣ, ಬಿಲ್ಲವ, ಪರಿಶಿಷ್ಟ ಜಾತಿ, ಕ್ರೈಸ್ತ ಸಮುದಾಯ ಸೇರಿದಂತೆ ಒಟ್ಟು ಒಂಭತ್ತು ಕುಟುಂಬಗಳಿವೆ. ಶಾಲಾ ಕಾಲೇಜು ಸೇರಿದಂತೆ ಸರಿಸುಮಾರು ಹದಿನೈದು ಮಕ್ಕಳು ನಿತ್ಯವೂ ದೋಣಿ ಮೂಲಕ ಮರವಂತೆ ಹಾಗೂ ನಾಡಾ ಕಡೆಗೆ ಸಾಗಿ ವಿವಿಧ ಶಾಲಾ ಕಾಲೇಜುಗಳಿಗೆ ತೆರಳುವ ಸ್ಥಿತಿ ಇದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಈ ಭಾಗದ ಜನರಿಗೆ ಹಾಗೂ ವಿದ್ಶಾರ್ಥಿಗಳಿಗೆ ಅಗತ್ಯವಾಗಿ ಬೇಕಿರುವ ಸೇತುವೆಯನ್ನು ಕಲ್ಪಿಸುತ್ತಾರೆಯೇ ಕಾದು ನೋಡಬೇಕಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!