Connect with us

Hi, what are you looking for?

Diksoochi News

ರಾಜ್ಯ

ಮಳೆ ಹಾನಿಗೆ ಕೇಂದ್ರದಿಂದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ- ಸಚಿವೆ ಶೋಭಾ ಕರಂದ್ಲಾಜೆ

0

ಉಡುಪಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕಳೆದ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 629.03 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಗಳ ನೆರವಿನ ಅನುಮೋದನೆಯನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಯಲ್ಲಿ ನಡೆದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಅನಾವೃಷ್ಟಿ ಕಾರಣದಿಂದ 2020 ನೇ ಸಾಲಿನಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ 113.69 ಕೋಟಿ ರೂ. ಗಳನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ಅನುಮೋದನೆ ನೀಡಿದೆ.
2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು 750.12 ಕೋಟಿ ರೂ.ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿರುವುದಾಗಿ ಸಚಿವೆ ತಿಳಿಸಿರುತ್ತಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!